ಬೆಂಗಳೂರು: ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ.