25 ಕೋಟಿ ಲಂಚ ಪ್ರಕರಣ: ಸಮೀರ್ ವಾಂಖೆಡೆ ವಿರುದ್ಧ ಸಿಬಿಐ ತನಿಖೆ

ವದೆಹಲಿ: ಮಾದಕವಸ್ತು ಪ್ರಕರಣದಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಿದ ಕಾರ್ಡೆಲಿಯಾ ಹಡಗಿನ ಮಾಲೀಕರಿಂದ 25 ಕೋಟಿ ರೂ.ಗಳ ಲಂಚ ಕೇಳಿದ ಆರೋಪದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.

 

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯಿಂದ ಅವರ ನಿವಾಸದ ಮೇಲೆ ದಾಳಿ ನಡೆಸುತ್ತಿದೆ. ಸಮೀರ್ ವಾಂಖೆಡೆ ಅವರು ಕಾರ್ಡೆಲಿಯಾ ಕ್ರೂಸ್ ಮೇಲೆ ದಾಳಿ ನಡೆಸಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದರು.

2021 ರಲ್ಲಿ ನಗರದ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದಾಗ ವಾಂಖೆಡೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಥವಾ ಎನ್ಸಿಬಿಯ ಮುಂಬೈ ವಲಯ ಮುಖ್ಯಸ್ಥರಾಗಿದ್ದರು.ನಾಲ್ಕು ವಾರಗಳ ಕಾಲ ಜೈಲಿನಲ್ಲಿದ್ದ ಆರ್ಯನ್ ಖಾನ್ ಅವರನ್ನು ಸಾಕಷ್ಟು ಪುರಾವೆಗಳ ಕೊರತೆಯಿಂದಾಗಿ 2022 ರ ಮೇ ತಿಂಗಳಲ್ಲಿ ಮಾದಕವಸ್ತು ವಿರೋಧಿ ಸಂಸ್ಥೆ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿತು.

Loading

Leave a Reply

Your email address will not be published. Required fields are marked *