ರಾಜ್ಯದಲ್ಲಿ ‌ಎನ್​ಇಪಿ‌ ರದ್ದುಪಡಿಸಲಾಗಿದೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ‌ಎನ್​ಇಪಿ‌ ರದ್ದುಪಡಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಹೇಳಿದರು. ಈಗ ಹೊಸದಾಗಿ ಎಸ್​ಇಪಿ‌ ಅನುಷ್ಠಾನಗೊಳ್ಳಬೇಕಿದ್ದು, ಪಿಯುಸಿ ಪೂರಕ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆ ಒಂದೊಂದೇ ಈಡೇರಿಸುತ್ತಿದ್ದೇವೆ ಎಂದರು. ಇನ್ನು ಇದೇ ವೇಳೆ ಶಿವಮೊಗ್ಗ ಜಿಲ್ಲೆಯ 7 ತಾಲೂಕು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಹಾರ ನೀಡುವ ಬಗ್ಗೆ ‌ಕ್ರಮ ವಹಿಸಲಾಗುವುದು ಎಂದರು.

Loading

Leave a Reply

Your email address will not be published. Required fields are marked *