ಬೆಂಗಳೂರು: ಮೇ 6 ಮತ್ತು 7ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ಶೋ ನಡೆಸಲಿದ್ದಾರೆ. ಪ್ರಧಾನಿ ಮೋದಿ ರೋಡ್ಶೋ ವೇಳೆ ಕಾಂಗ್ರೆಸ್ ಷಡ್ಯಂತ್ರ ಮಾಡಲು ಸಂಚು ರೂಪಿಸಿದೆ. ರೋಡ್ಶೋ ವೇಳೆ ಆಂಬುಲೆನ್ಸ್ ಕಳಿಸಲು ಸಂಚು ರೂಪಿಸಿದೆ. ಆಂಬುಲೆನ್ಸ್ ಸಂಚಾರಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಆದರೆ ಆಂಬುಲೆನ್ಸ್ಗಳಲ್ಲಿ ರೋಗಿ ಇರುವ ಬಗ್ಗೆ ಪರಿಶೀಲನೆ ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.