ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಟ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿರುವ ಘಟನೆ ನಗರದ ಸಂತೇಮರಹಳ್ಳಿ ವೃತ್ತದ ಬಳಿ ನಡೆದಿದೆ.
ಅಲ್ಲದೇ ಕಾರಿನ ಮೇಲೆ ಸುದೀಪ್ ಜೊತೆ ಕಾರಿನ ಮೇಲೆ ನಿಂತು ವಿ ಸೋಮಣ್ಣ ಜನರತ್ತ ಕೈ ಬೀಸುತ್ತಿದ್ದರು. ಈ ವೇಳೆ ಸುದೀಪ್ ಬಳಿ ತೆರಳಲು ಕಾರಿನ ಮೇಲೆ ಹತ್ತಿದ ಅಭಿಮಾನಿ, ಆಯತಪ್ಪಿ ಸೋಮಣ್ಣರನ್ನು ಎಳೆದುಕೊಂಡು ಕೆಳಗೆ ಬಿದ್ದಿದ್ದಾನೆ. ಕಾರಿನ ಟಾಟ್ನಿಂದ ಕೆಳಗೆ ಬೀಳದಂತೆ ಸೋಮಣ್ಣರನ್ನ ಬೌನ್ಸರ್ ಹಿಡಿದುಕೊಂಡಿದ್ದಾರೆ.