ಪ್ರಚಾರದ ವೇಳೆ ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು: ಲಘು ಲಾಠಿ ಪ್ರಹಾರ

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಟ ಸುದೀಪ್ ಅವರು​ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಸುದೀಪ್ ಅವರನ್ನು​ ನೋಡಲು ಅಭಿಮಾನಿಗಳು ಮುಗಿಬಿದ್ದದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿರುವ ಘಟನೆ ನಗರದ ಸಂತೇಮರಹಳ್ಳಿ ವೃತ್ತದ ಬಳಿ ನಡೆದಿದೆ.

ಅಲ್ಲದೇ ಕಾರಿನ ಮೇಲೆ  ಸುದೀಪ್ ಜೊತೆ ಕಾರಿನ‌ ಮೇಲೆ ನಿಂತು ವಿ ಸೋಮಣ್ಣ ಜನರತ್ತ ಕೈ ಬೀಸುತ್ತಿದ್ದರು. ಈ ವೇಳೆ ಸುದೀಪ್ ಬಳಿ ತೆರಳಲು ಕಾರಿನ ಮೇಲೆ ಹತ್ತಿದ ಅಭಿಮಾನಿ, ಆಯತಪ್ಪಿ ಸೋಮಣ್ಣರನ್ನು ಎಳೆದುಕೊಂಡು ಕೆಳಗೆ ಬಿದ್ದಿದ್ದಾನೆ. ಕಾರಿನ ಟಾಟ್​​ನಿಂದ ಕೆಳಗೆ ಬೀಳದಂತೆ ಸೋಮಣ್ಣರನ್ನ ಬೌನ್ಸರ್ ಹಿಡಿದುಕೊಂಡಿದ್ದಾರೆ.

Loading

Leave a Reply

Your email address will not be published. Required fields are marked *