ಬೆಂಗಳೂರು: ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದು ಹಾಗೂ ಬಿಡುವುದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಹುದ್ದೆ ಕೊಡುವುದು ಸಿಎಂ ವಿವೇಚನೆಗೆ ಬಿಟ್ಟಿದ್ದು, ಜೊತೆಯಲ್ಲಿ ಹೈಕಮಾಂಡ್ ನಾಯಕರು ನಿರ್ಧಾರ ಮಾಡಬೇಕು. ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷರು ಸೇರಿ ಎಲ್ಲರೂ ಇದನ್ನು ನಿರ್ಧಾರ ಮಾಡಬೇಕಾಗಿದೆ ಎಂದರು.
ಹಲವಾರು ರಾಜ್ಯಗಳಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ದಾರೆ. ಇಲ್ಲೂ ಕೂಡ ಒಬ್ಬ ಡಿಸಿಎಂ ಇದ್ದಾರೆ. ಆದರೆ 3 ಡಿಸಿಎಂ ಮಾಡುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಕಾಂಗ್ರೆಸ್ ನಲ್ಲಿ ಮೂವರು ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಗೊಂದಲ ಸೃಷ್ಟಿಗೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಈ ಕುರಿತಾಗಿ ಹೈಕಮಾಂಡ್ ಗೆ ಪತ್ರವನ್ನು ಬರೆದಿದ್ದಾರೆ. ರಾಜಣ್ಣ ನಡೆಗೆ ಕೆಲವರು ಬೆಂಬಲ ಸೂಚಿಸಿದರೆ ಮತ್ತೆ ಕೆಲವರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.