ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ಹೆಚ್​ ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಲಾಂಗ್ ರಿಲೇಷನ್ ಶಿಪ್ ಮುಂದುವರೆಸುವ ಬಗ್ಗೆ ಚರ್ಚೆಗಳು ನಡೆದಿವೆ. ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ.

ನಾಡಿನ ಜನತೆ ಹಿತರಕ್ಷಣೆ ದೃಷ್ಟಿಯಿಂದ ಕೆಲ ವಿಷಯಗಳು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ದಸರಾ ಹಬ್ಬದ ನಂತರ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಮಾತನಾಡಲಿದ್ದಾರೆ. ನಾನು ಈಗ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಜೆಡಿಎಸ್ ಬೆಂಬಲ ಕೊಟ್ಟಿದ್ದೇವೆ. ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದರು.

Loading

Leave a Reply

Your email address will not be published. Required fields are marked *