ಚಿಕ್ಕಮಗಳೂರು: ಶಾಸಕ ಎಸ್ಟಿ ಸೋಮಶೇಖರ್ ಅವರ ಅಸಮಾಧಾನಕ್ಕೆ ಹಲವು ಕಾರಣಗಳಿವೆ. ಇದರ ಬಗ್ಗೆ ಚರ್ಚೆ ಇವಾಗ ಮಾಡುವುದಿಲ್ಲ. ನಿಷ್ಠೆ ಎಂಬುವುದು ಸನ್ನಿವೇಶದ ಅವಶ್ಯಕತೆ ಅಲ್ಲ ಜೀವನದ ಜೀವಾಳವಾಗಿರಬೇಕು.
ಸನ್ನಿವೇಶಕ್ಕೆ ತಕ್ಕಂತೆ ನಿಷ್ಠೆ ಬದಲಾಗುವಂತದ್ದು ಕೆಲವರಿಗೆ ಇರುತ್ತೆ. ಎಸ್ಟಿ ಸೋಮಶೇಖರ್ ಅವರ ಬಗ್ಗೆ ಈಗೇನು ಹೇಳಲು ಬಯಸುವುದಿಲ್ಲ. ಸಂದರ್ಭ ಬಂದಾಗ ಹೇಳುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ ರವಿ ಹೇಳಿದರು