ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿದಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ. ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ರಾಜ್ಯ ಸರ್ಕಾರ, ಸಂಸದರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಖಾಲಿ ಬಿಂದಿಗೆ ಕೊಟ್ಟಿದೆ ಎಂದು ಘೋಷಣೆ ಕೂಗುತ್ತಿದ್ದಾರೆ. ಹೋರಾಟಕ್ಕೆ ಕನ್ನಡಸೇನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.