ಬೆಂಗಳೂರಿನಲ್ಲಿ ಬಿಲ್ಡರ್ ಸಂತೋಷ್ ಮನೆ ಮೇಲೆ ಐಟಿ ದಾಳಿ ಪ್ರಕರಣ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ದಾಳಿ ವೇಳೆ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು ಎಂಬುವುದು ಹಾಸ್ಯಾಸ್ಪದ ಎಂದರು. ಚಿತ್ರದುರ್ಗ ನಗರದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಹಣ ಸಂಗ್ರಹ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್’ಗೆ ಹಣ ನೀಡಲು ಪೈಪೋಟಿ ಆರಂಭಿಸಿದ್ದಾರೆ.
ಭದ್ರಾ ಯೋಜನೆಗೆ 1,950 ಕೋಟಿ ಹಣ ಬಾಕಿ ಉಳಿಸಿಕೊಳ್ಳಲಾಗಿದೆ. ನೇರ ರೈಲು ಮಾರ್ಗದ ಭೂಸ್ವಾಧೀನಕ್ಕೆ ಹಣ ಬಿಡುಗಡೆ ಮಾಡಿಲ್ಲ. ಕಮಿಷನ್ ಬೇಕೆಂದು ಕರೆ ಮಾಡುತ್ತಿದ್ದಾರೆ ಎಂದು ಅಧಿಕಾರಗಳೇ ಹೇಳುತ್ತಿದ್ದಾರೆ. ಚುನಾವಣೆಗೆ ಕಾಂಗ್ರೆಸ್ ಫಂಡಿಂಗ್ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಸರ್ಕಾರ ದಿವಾಳಿ ಆಗಿದೆ ಎಂದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದರು.