ಬಿಜೆಪಿಯವರು ಡಿಕೆ ಸಾಹೇಬರನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಇಬ್ಬರೂ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ ಇದ್ದಂತೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ಬಿಜೆಪಿಯವರು ಡಿಕೆ ಸಾಹೇಬರನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಇಡಿ, ಸಿಬಿಐಯನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಡಿಕೆ ಸಾಹೇಬ್ರನ್ನು ನೋಡಿದ್ರೆ ಬಿಜೆಪಿಯವರಿಗೆ ಹೆದರಿಕೆ ಇದೆ. ಹೀಗಾಗಿ ಪದೇಪದೆ ಅವರ ಮೆಲೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದರು.

ಡಿಕೆ ಸಾಹೇಬರು ಒಕ್ಕಲಿಗ ಸಮುದಾಯದ ಅತಿದೊಡ್ಡ ಲೀಡರ್ ಆಗಿದ್ದಾರೆ. ಇಂತಹ ದೊಡ್ಡ ಲೀಡರ್ ಡಿಕೆ ಸಾಹೇಬ್ರನ್ನು ಜೈಲಿಗೆ ಹಾಕುವಂತೆ ಕುಮಾರಸ್ವಾಮಿ ಕೇಂದ್ರ ಸರ್ಕಾರ ಜೊತೆ ಒಪ್ಪಂದ ಮಾಡಿಕೊಂಡು ಬಂದಿದ್ದಾರೆ. ನಿಮ್ಮದೇ ಸಮುದಾಯದ ನಾಯಕನನ್ನ ಜೈಲಿಗೆ ಹಾಕುವಂತೆ ಪ್ರಯತ್ನ ಮಾಡೋದು ಎಷ್ಟು ಸರಿ? ಒಕ್ಕಲಿಗ ಸಮುದಾಯ ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಬೆನ್ನೆಲುಬಾಗಿ ನಿಂತಿದೆ. ಇದಕ್ಕೆಲ್ಲ ನೀವು ದ್ರೋಹ ಬಗೆದಂತಲ್ಲವೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು

Loading

Leave a Reply

Your email address will not be published. Required fields are marked *