ಚಾಮರಾಜನಗರ;- ಹನೂರು ತಾಲೂಕಿನ ಬೈರನಾಥ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ ನಲ್ಲಿದ್ದ ಮೇವಿಗೆ ಬೆಂಕಿ ಹತ್ತಿಕೊಂಡು ಮೇವು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಟ್ರಾಕ್ಟರ್ನಲ್ಲಿ ಇದ್ದ ಅಪಾರ ಪ್ರಮಾಣದ ಮೇವು ಬೆಂಕಿಗೆ ಆಹುತಿ ಆಗಿದೆ. ಜಾನುವಾರುಗಳಿಗೆ ಮೇವು ಸಂಗ್ರಹಣೆಗಾಗಿ ರೈತ ಮಹದೇವಸ್ವಾಮಿ ಗ್ರಾಮಕ್ಕೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.