ಭೀಕರ ಬಸ್ ಅಪಘಾತ: 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಗಾಂಧಿನಗರ: ಗುಜರಾತ್ನ (Gujarat) ಪಂಚಮಹಲ್ನ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ (Accident) 38 ರಾಜ್ಯ ರಿಸರ್ವ್ ಪೊಲೀಸ್ (ಎಸ್ಆರ್ಪಿ) ಸಿಬ್ಬಂದಿ ಗಾಯಗೊಂಡಿದ್ದು, ಅದರಲ್ಲಿ ಒಂಬತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.ಗುಡ್ಡಗಾಡು ಪ್ರದೇಶದಲ್ಲಿ ಬಸ್ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಗಾಯವಾಗಿದೆ. ಪೊಲೀಸರು (Police) ಪಾವಗಡದಲ್ಲಿ ಫೈರಿಂಗ್ ಅಭ್ಯಾಸ ಮುಗಿಸಿ ದಾಹೋದ್ ನಗರಕ್ಕೆ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ 50 ಜನ ಪೊಲೀಸರು ಪ್ರಯಾಣಿಸುತ್ತಿದ್ದರು. ಈ ಪೈಕಿ 38 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ 29 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ. ಒಂಬತ್ತು ಮಂದಿ ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಡೋದರಾದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *