ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಡ್ಯಾಂ ಅನ್ನು ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ್ದಾರೆ. ಮೂರು ತಾಲೂಕು ಹಾಗೂ 45 ಗ್ರಾಮಗಳಿಗೆ ಈ ಡ್ಯಾಂ ಕುಡಿಯುವ ನೀರು ಒದಗಿಸಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಹೆಚ್ ಮುನಿಯಪ್ಪ, ಬೈರತಿ ಸುರೇಶ್ ಸೇರಿ ಜಿಲ್ಲೆಯ ಶಾಸಕರುಗಳು ಸಾಥ್ ನೀಡಿದರು.