ವರ್ಗಾವಣೆ ದಂಧೆ ಮಾಡಿದ್ದೇನೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯತೀಂದ್ರ ಅವರು ವರ್ಗಾವಣೆ ವಿಚಾರವಾಗಿ ಮಾತಾಡಿಲ್ಲ. ಸಿಎಸ್‍ಆರ್ ಫಂಡ್ (ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್) ಬಗ್ಗೆ ಮಾತಾಡಿರುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರ ಯತೀಂದ್ರ ಅವರ ವೈರಲ್ ಆದ ವೀಡಿಯೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ ನಾನು ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೇನೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ. ಪತ್ರಕರ್ತರ ಪ್ರಶ್ನೆಗೆ, ಐದು ಹೆಸರು ಎಂದರೆ ವರ್ಗ ಏನಯ್ಯ? ಅದು ಸಿಎಸ್‍ಆರ್ ಲಿಸ್ಟ್. ಶಾಲೆ ಕಟ್ಟಡಗಳನ್ನು ಸಿಎಸ್‍ಆರ್ ಫಂಡ್‍ನಿಂದ ರಿಪೇರಿ ಮಾಡಿಸಲಾಲಾಗುತ್ತಿದೆ. ಈ ಬಗ್ಗೆ ಯತೀಂದ್ರ ಅವರು ಹೇಳಿದ್ದಾರೆ. ಕುಮಾರಸ್ವಾಮಿ ರಾಜಕೀಯವಾಗಿ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

Loading

Leave a Reply

Your email address will not be published. Required fields are marked *