ಡಿಸಿಎಂ ಡಿಕೆ ಭೇಟಿಯಾದ ಬಿಜೆಪಿಯ ಮಾಜಿ ಸಚಿವ ಬಿ.ಶ್ರೀರಾಮುಲು

ಬೆಂಗಳೂರು: ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಜಾರಿಗೆ ಬಂದ ಕಾರ್ಯಕ್ರಮಗಳನ್ನ ಎಲ್ಲಾ ಸರ್ಕಾರಗಳು ಉಳಿಸಿಕೊಂಡು ಬರುತ್ತಿವೆ. ಬಿಜೆಪಿ ಸರ್ಕಾರ ಕೂಡಾ ಹಿಂದಿನ ಸರ್ಕಾರಗಳು ಮಾಡಿದ ಯೋಜನೆ ಮುಂದುವರೆಸಿದೆ. ಈ ಗ್ಯಾರಂಟಿ ಯೋಜನೆಗಳು ಕೂಡಾ ಹಾಗೆ ಯಥಾಸ್ಥಿತಿಯಲ್ಲಿ ಮುಂದುವರಿದುಕೊಂಡು ಹೋಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಮಾಜಿ ಸಚಿವರಾದ ಶ್ರೀರಾಮುಲು ಅವರು ಸೋಮವಾರ ಬೆಂಗಳೂರಿನಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಮಗಳ ಮದುವೆಯ ಆಮಂತ್ರಣ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆ ಮೈದಾನದಲ್ಲಿ ನನ್ನ ಮಗಳ ಮದುವೆ ಕಾರ್ಯಕ್ರಮ ಇದೆ. ಹೀಗಾಗಿ ಸಿಎಂ ಮತ್ತು ಡಿಸಿಎಂಗೆ ಆಹ್ವಾನ ನೀಡಲು ಬಂದಿದ್ದೆ. ಇದು ನನ್ನ ಖಾಸಗಿ ಕಾರ್ಯಕ್ರಮ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಪಷ್ಟಪಡಿಸಿದರು.

Loading

Leave a Reply

Your email address will not be published. Required fields are marked *