ತುಮಕೂರು: ಪದವಿ ಪಡೆದ ವಿದ್ಯಾರ್ಥಿ ಹಾವು ಕಡಿದು ಸಾವು..!

ತುಮಕೂರು: ರಾಜ್ಯದಲ್ಲಿ ಹಾವು ಕಡಿತಕ್ಕೆ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪದವಿ ಪಡೆದ ವಿದ್ಯಾರ್ಥಿ ಹಾವು ಕಡಿದು ಸಾವನ್ನಪ್ಪಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಿನ್ನೇ ಸಾಹೇ ಘಟಿಕೋತ್ಸವದಲ್ಲಿ ಪದವಿ ಪಡೆದಿದ್ದ ಕೇರಳ ಮೂಲದ ಅದಿತ್ ಬಾಲಕೃಷ್ಣನ್ ವಿದ್ಯಾರ್ಥಿಯಾಗಿದ್ದು,

ನಿನ್ನೇ ಪಾರ್ಕಿನಲ್ಲಿ ಹಾವು ಕಡಿದಿರುವ ಶಂಕೆಯಾಗಿದೆ. ಹಾವು ಕಡಿತ ಗಮನಿಸದೇ ಮನೆಗೆ ಬಂದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮೃತನ ಶವ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Loading

Leave a Reply

Your email address will not be published. Required fields are marked *