ಬೆಂಗಳೂರು:- 10 ಪ್ರಮುಖ ಬಿಲ್ ಗಳು ಅಧಿವೇಶನದಲ್ಲಿ ಮಂಡನೆ ಆಗಲಿದೆ ಎಂದು HK ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು ಡಿಸೆಂಬರ್ 4 ರಂದು ನಮ್ಮ ಬಿಸಿನೆಸ್ ಅಡ್ವಸರಿ ಸಮಿತಿ ಸಭೆ ನಡೆಯಲಿದ್ದು, 10 ಪ್ರಮುಖ ಬಿಲ್ ಗಳ ಮಂಡನೆ ಮಾಡಲಾಗುವ ಕುರಿತು ಸಲಹೆ ಸೂಚನೆಗಳನ್ನು ಪಡೆಯಲಾಗುವುದು ಜೊತೆಗೆಆ ಸಭೆಯಲ್ಲಿ ಯಾವ ಬಿಲ್ ಮಂಡನೆ ಆಗಬೇಕು ಎಂಬ ಸುದೀರ್ಘವಾದ ಚರ್ಚೆ ನಡೆಸುತ್ತೇವೆ
ಅಧಿವೇಶನದಲ್ಲಿ ಬರಗಾಲ ಕುರಿತು ಹೆಚ್ಚು ಚರ್ಚೆ ಆಗಲಿದ್ದು ಪ್ರಮುಖ ಸಮಸ್ಯೆ, ಅಭಿವೃದ್ಧಿ ವಿಚಾರಗಳು ಸಹ ಚರ್ಚೆ ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಸಮಸ್ಯೆಗಳು ಬಗ್ಗೆ ಚರ್ಚೆಗೆ ಹೆಚ್ಚು ಮಹತ್ವ ಕೊಡಲಾಗಿದೆ ಎಂದರು. ಐದು ರಾಜ್ಯ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಅವರುದೇಶದ ಐದು ರಾಜ್ಯಗಳಲ್ಲಿ ನಡೆದ ಮತದಾನ ನಂತರಈಗಾಗಲೇ ಮತದಾನೋತ್ತರ ಫಲಿತಾಂಶ ಬಂದಿದೆ. ಬಹುತೇಕ ಸಮೀಕ್ಷೆಗಳು ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಅಂತಾ ಫಲಿತಾಂಶ ನೀಡಿವೆ
ಇದರಲ್ಲಿತೆಲಂಗಾಣ, ಛತ್ತೀಸ್ಗಢ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭರವಸೆ ಇದ್ದುರಾಜಸ್ಥಾನದಲ್ಲಿ ಎಕ್ಸಿಟ್ ಪೋಲ್ ನಲ್ಲಿ ಕಾಂಗ್ರೆಸ್ ಹಿಂದೆ ಇದೆಈ ಎಲ್ಲ ಬೆಳವಣಿಗೆ ಫಲಿತಾಂಶ ನೋಡಿದರೆ ದೇಶದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆಕಾಂಗ್ರೆಸ್ ಪಕ್ಷದತ್ತ ಜನರ ಒಲವು ಹೆಚ್ಚಾಗಿದೆಜನರ ಆರ್ಶೀವಾದ ಕಾಂಗ್ರೆಸ್ ಮೇಲೆ ಇದೆ ಆದ್ದರಿಂದಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅಂತ್ಯ ಆಗಲಿದೆ ಎಂದು ಭವಿಷ್ಯ ನುಡಿದ ಅವರು