ರಾತ್ರೋರಾತ್ರಿ ಬಿತ್ತನೆ ಮಾಡಿದ ಹೊಲದಲ್ಲಿ ಖಾಸಗಿ ಕಂಪನಿ ಜೆಸಿಬಿಗಳ ಅಟ್ಟಹಾಸ..!

ಳ್ಳಾರಿ : ಮೈನಿಂಗ್ ಕಂಪನಿ ಅಭಿವೃದ್ಧಿಗಾಗಿ ಜಮೀನು ನೀಡಲಿಲ್ಲವೆಂದು ಬಿತ್ತನೆ ಮಾಡಿದ ಹೊಲದಲ್ಲಿ ರಾತ್ರೋರಾತ್ರಿ ಖಾಸಗಿ ಕಂಪನಿ ಸಿಬ್ಬಂದಿಗಳು ಜೆಸಿಬಿ ತಂದು ಬೆಳೆ ನಾಶ ಮಾಡಿ ಅಟ್ಟಹಾಸ ಮೇರೆದಿರುವಂತಹ ಘಟನೆ ಸಂಡೂರು ತಾಲೂಕಿನ ರಣಜಿತ್ ಪುರ ಗ್ರಾಮದಲ್ಲಿ ನಡೆದಿದೆ.

ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಿದ ಬೆಳೆ ನಾಶ ಕಂಡು ಅನ್ನದಾತರು ಕಣ್ಣಿರು ಹಾಕಿದ್ದಾರೆ. ಕಾಡಪ್ಪ ಮತ್ತು ಪರಮೇಶ್ವರಪ್ಪ ಸೇರಿದಂತೆ ಇತರೆ ರೈತರ ಬೆಳೆನಾಶ ಮಾಡಲಾಗಿದೆ.ಕಷ್ಟಪಟ್ಟು ಬಿತ್ತಿದ ಈರುಳ್ಳಿ, ಮೆಕ್ಕೆ ಜೋಳ ಸೇರಿದಂತೆ ಕೃಷಿ ಪರಿಕಗಳ ನಾಶ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ.

Loading

Leave a Reply

Your email address will not be published. Required fields are marked *