ಲೋಕಸಭೆಗೆ ನಿಲ್ಲಲು ಶಿವರಾಜ್ ಕುಮಾರ್’ಗೆ ಆಫರ್ ಕೊಟ್ಟ ಡಿಕೆ ಶಿವಕುಮಾರ್

ಬೆಂಗಳೂರು: ಸ್ಯಾಂಡಲ್‍ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ (Shivaraj Kumar) ಲೋಕಸಭೆಗೆ ನಿಲ್ಲಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಫರ್ ಕೊಟ್ಟಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ಈಡಿಗರ (Ediga) ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಕೆಶಿಯವರು ನಟ ಶಿವಣ್ಣಗೆ ಈ ಆಫರ್ ನೀಡಿದ್ದಾರೆ.ಪಾರ್ಲಿಮೆಂಟಿಗೆ ರೆಡಿ ಆಗಿ ಅಂತ ನಾನು ಈಗಾಗಲೇ ಶಿವಣ್ಣಗೆ ಹೇಳಿದ್ದೇನೆ. ಆಗ ಅವರು,

ಇಲ್ಲ ಒಂದು 5 ಚಿತ್ರ ಒಪ್ಪಿಕೊಂಡಿದ್ದೇನೆ ಅಂದ್ರು. ಚಿತ್ರ ಯಾವಾಗಾದ್ರೂ ಮಾಡಬಹುದು. ಆದರೆ ಪಾರ್ಲಿಮೆಂಟ್‍ಗೆ ಹೋಗುವ ಅವಕಾಶ ಎಲ್ಲರಿಗೂ ಸಿಗಲ್ಲ ಅಂತಾ ಹೇಳಿದ್ದೇನೆ ಎಂದು ಡಿಕೆಶಿ (DK Shivakumar) ತಿಳಿಸಿದರು. ಲೋಕಸಭೆಯಲ್ಲಿ (Loksabha) ನಮಗೆ ಆಶೀರ್ವಾದ ಮಾಡುವ ಕೆಲಸ ನೀವು ಮಾಡಬೇಕು. ಮಂಗಳೂರು, ಉಡುಪಿ, ಉತ್ತರ ಕರ್ನಾಟಕ ಎಲ್ಲೆ ಇರ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸುವ ಕೆಲಸ ಮಾಡಿ ಎಂದರು.

Loading

Leave a Reply

Your email address will not be published. Required fields are marked *