ಐಪಿಎಲ್​ ಹರಾಜು: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 14 ಕ್ರಿಕೆಟಿಗರು!

ಐಪಿಎಲ್​ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಕರ್ನಾಟಕದ ಒಟ್ಟು 14 ಆಟಗಾರರು ಅದೃಷ್ಟ ಪರೀಸಲಿದ್ದಾರೆ. ಟೀಮ್​ ಇಂಡಿಯಾ ಪರ ಆಡಿರುವ ರಾಜ್ಯದ ಬ್ಯಾಟರ್​ಗಳಾದ ಮನೀಷ್​ ಪಾಂಡೆ ಮತ್ತು ಕರುಣ್​ ನಾಯರ್​ ತಲಾ 50 ಲಕ್ಷ ರೂ. ಮೂಲಬೆಲೆ ಹೊಂದಿದ್ದಾರೆ. ರಾಜ್ಯದ ಉಳಿದ 12 ಆಟಗಾರರು ತಲಾ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹಾಲಿ ದೇಶೀಯ ಕ್ರಿಕೆಟ್​ ಋತುವಿನಲ್ಲಿ ವಿದರ್ಭಕ್ಕೆ ವಲಸೆ ಹೋಗಿರುವ ಕರುಣ್​ ನಾಯರ್​, ವಿಸಿಎ ಕಡೆಯಿಂದ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದೇ ರೀತಿ ಕೇರಳಕ್ಕೆ ವಲಸೆ ಹೋಗಿರುವ ಸ್ಪಿನ್ನರ್​ ಶ್ರೇಯಸ್​ ಗೋಪಾಲ್​ ಮತ್ತು ಮಿಜೋರಾಂಗೆ ವಲಸೆ ಹೋಗಿರುವ ಕೆಸಿ ಕಾರ್ಯಪ್ಪ ಕೂಡ ಹರಾಜಿನಲ್ಲಿದ್ದಾರೆ. ಇನ್ನುಳಿದಂತೆ ರಾಜ್ಯ ತಂಡದ ಜೆ. ಸುಚಿತ್​, ಶುಭಾಂಗ್​ ಹೆಗ್ಡೆ, ನಿಹಾಲ್​ ಉಲ್ಲಾಳ್​, ಬಿಆರ್​ ಶರತ್​ ಜತೆಗೆ ಮಹಾರಾಜ ಟ್ರೋಫಿಯಲ್ಲಿ ಮಿಂಚಿರುವ ಮನ್ವಂತ್​ ಕುಮಾರ್​, ಎಲ್​ಆರ್​ ಚೇತನ್​, ಕೆಎಲ್​ ಶ್ರೀಜಿತ್​, ಎಂ. ವೆಂಕಟೇಶ್​, ಮೋನಿಶ್​ ರೆಡ್ಡಿ, ಅಭಿಲಾಷ್​ ಶೆಟ್ಟಿ ಹರಾಜಿನಲ್ಲಿದ್ದಾರೆ

Loading

Leave a Reply

Your email address will not be published. Required fields are marked *