ಧಾರವಾಡ: ರಾಜ್ಯದಲ್ಲಿ ಲೋಕಸಭೆ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವಂತೆ ಕೇಳಿರುವುದಾಗಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಧಾರವಾಡ ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ” ನಮ್ಮ ಸರ್ಕಾರ ಬಂದ ಬಳಿಕ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಜನರು ಬದಲಾವಣೆ ಬಯಸಿದ್ದಾರೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ.
ಜನ ಈಗ ತೀರ್ಮಾನ ತೆಗೆದುಕೊಂಡು ಆಗಿದೆ. ರಾಜ್ಯದಲ್ಲಿ ಕನಿಷ್ಠ 25 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಬೆಂಗಳೂರು ಸೆಂಟ್ರಲ್, ಹಾವೇರಿ, ಬೀದರ್ ಸೇರಿ ಮೂರು ಕ್ಷೇತ್ರದಲ್ಲಿ ಮುಸ್ಲಿಂರಿಗೆ ಟಿಕೆಟ್ ಕೇಳಿದ್ದೇವೆ ಎಂದರು.
ಆದರೆ, ಅಭ್ಯರ್ಥಿಗ ಬಗ್ಗೆ ಸಚಿವರು ಮಾಹಿತಿ ನೀಡಿಲ್ಲ. ಟಿಕೆಟ್ಗೆ ಈಗಾಗಲೇ ಮನವಿ ಮಾಡಿದ್ದೇವೆ. ಹೈಕಮಾಂಡ್ ತೀರ್ಮಾನ ಏನು ಎಂಬುದನ್ನು ಕಾದು ನೋಡಬೇಕಿದೆ ಎಂದರು.