ರೌಡಿಶೀಟರ್, ಮೀಟರ್ ಬಡ್ಡಿ ನಡೆಸುತ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು:- ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ. ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್​​​ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್​ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ತಲಾಶ್ ಮಾಡಿದ್ದಾರೆ. ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ.

ಅಧಿಕಾರಿಗಳು ಏಕಾಏಕಿ ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಬೋರ್ ವೆಲ್ ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ. ಅನಿಲ್ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್​​ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್​ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಉದ್ಯಮಿ ಕೃಷ್ಣೇಗೌಡ ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Loading

Leave a Reply

Your email address will not be published. Required fields are marked *