ರಾಜ್ಯದಾದ್ಯಂತ “ಲೋಕಾ” ರೇಡ್ – ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ಶೋಧ!

ಬೆಂಗಳೂರು:- ಲೋಕಾಯುಕ್ತ ಅಧಿಕಾರಿಗಳು ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಅಧಿಕಾರಿಗಳು ಒಟ್ಟು ಏಳು ಕಡೆ ದಾಳಿ ಮಾಡಿದ್ದು, ಹಲವು ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ಶೋಧ ಕಾರ್ಯ ಮಾಡಿದ್ದಾರೆ. ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಶೋಧ ನಡೆಸಿದ್ದಾರೆ.

ಕುಂದಣ ಪಿಡಿಒ ಪದ್ಮನಾಬ್ ಅವರಿ​ಗೆ ಸೇರಿದ​​​​ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದರೆ. ಜೊತೆಗೆ ದಾಬಸ್​ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್​ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಅವರು ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಕೆಲ ದಿನಗಳ‌ ಹಿಂದೆ ನಾಗರಾಜ್ 7.50 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದನು. ಇನ್ನು ಮಂಡ್ಯ ಜಿಲ್ಲೆಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿ ಮಂಜೇಶ್ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ‌ ರೇಡ್ ಮಾಡಲಾಗಿದೆ.

Loading

Leave a Reply

Your email address will not be published. Required fields are marked *