ನಿವೃತ್ತಿಗೂ ಮುನ್ನವೇ IPS ಪ್ರತಾಪ್ ರೆಡ್ಡಿ ರಾಜೀನಾಮೆ

 ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ ನಿವೃತ್ತಿಗೆ ಎರಡು ತಿಂಗಳು ಇರುವಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು.

ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇತ್ತಿಚೆಗೆ ಅಷ್ಟೇ ಡಿಜಿ& ಐಜಿ ಅಲೋಕ್ ಮೋಹನ್ ಮೆಮೋ ಒಂದನ್ನು ನೀಡಿದ್ರು.  ಅರ್ಚರಿ ಗೇಮ್ಸ್ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ಮೆಮೋ ನೀಡಲಾಗಿತ್ತು. ನಿಮ್ಮ ಮೇಲೆ ಯಾಕೆ ಸೂಕ್ತ ಕ್ರಮಕೈಗೊಳ್ಳಬಾರದು ಅಂತೆ ಮೆಮೋ ನೀಡಿದ್ದರು. ಪ್ರತಾಪ್ ರೆಡ್ಡಿ ಅವರ ಜೊತೆಗೆ ಇನ್ನೂ 11 ಅಧಿಕಾರಿಗೆ ಮೆಮೋ ನೀಡಲಾಗಿದೆ. ಪ್ರತಾಪ್ ರೆಡ್ಡಿ, ಸಲೀಂ , ಅಲೋಕ್ ಕುಮಾರ್, ಸೀಮಂತ್ ಕುಮಾರ್ ಸಿಂಗ್ ಹೀಗ 11 ಅಧಿಕಾರಿಗಳಿಗೆ ಮೆಮೋ ನೀಡಲಾಗಿದೆ. ಇವೆಲ್ಲಾ ಕ್ರಮಗಳು ಪ್ರತಾಪ್ ರೆಡ್ಡಿ ಅವರಿಗೆ ಘಾಸಿ ಮಾಡಿತ್ತು ಎನ್ನಲಾಗಿದೆ.

 

Loading

Leave a Reply

Your email address will not be published. Required fields are marked *