ಬೆಂಗಳೂರು: ಬೆಂಗಳೂರಿನ ನಾಯಂಡಹಳ್ಳಿ ಬಳಿಯ ಗಂಗೊಂಡನಹಳ್ಳಿ ಬಳಿ ಗುಜುರಿ ಅಂಗಡಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಂಗಡಿಯಲ್ಲಿದ್ದ ವೆಸ್ಟೇಜ್ ಎಲ್ಲಾವು ಬೆಂಕಿಗಾಹುತಿಯಾದ ಘಟನೆ ಜರುಗಿದೆ. ಇಂದು ಬೆಳಿಗ್ಗೆ 5:30 ರ ಸುಮಾರಿಗೆ ಘಟನೆ ಜರುಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. 4 ಅಗ್ನಿ ಶಾಮಕ ವಾಹನಗಳಿಂದ ಅಗ್ನಿ ನಂದಿಸುವ ಕಾರ್ಯ ನಡೆದಿದ್ದು, ಸಿಬ್ಬಂದಿಗಳು ಯಶಸ್ವಿಯಾಗಿ ಬೆಂಕಿ ನಂದಿಸಿದ್ದಾರೆ.