ಮಂಡ್ಯ: ಕುಮಾರಣ್ಣ ರಾಜ್ಯಕ್ಕೆ ಬೇಕು ಅಂತಾ ನಮ್ಮ ಶಾಸಕರು ಮತ್ತು ಮುಖಂಡರ ಕೂಗಾಗಿದೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಪಾಂಡವಪುರದಲ್ಲಿ ಸುದ್ದುಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದರ ಬಗ್ಗೆ ಮಾತನಾಡಿದ್ದಾರೆ. ಕುಮಾರಣ್ಣ ಅವರಿಗೆ ಹಲವು ಲೋಕಸಭಾ ಕ್ಷೇತ್ರದಲ್ಲಿ ಒತ್ತಾಯ ಇದೆ.
ಎಲ್ಲಿ ಅಂತಾ ಅವರು ಸ್ಪರ್ಧೆ ಮಾಡ್ತಾರೆ. ಕುಮಾರಣ್ಣ ನಮ್ಮ ರಾಜ್ಯಕ್ಕೆ ಬೇಕು. ಅವರು ಲೋಕಸಭಾ ಸ್ಪರ್ಧೆ ಮಾಡೋದು ಬಿಡೋದು ಮುಂದೆ ಗೊತ್ತಾಗುತ್ತೆ. ಅವರ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ. ಅದು ಪಕ್ಷದ ವರಿಷ್ಠರ ತೀರ್ಮಾನ. ಅವರು ನಮ್ಮ ರಾಜ್ಯಕ್ಕೆ ಬೇಕು ಅಂತಾ ಶಾಸಕರು ಮುಖಂಡರ ಕೂಗಾಗಿದೆ ಎಂದು ಸುಳಿವು ನೀಡಿದ್ದಾರೆ.
ಕೆಲವರು ಕುಮಾರಣ್ಣ ಕೇಂದ್ರಕ್ಕೆ ಹೋಗಲಿ ಅಂತಾರೆ. ಕೆಲವರು ರಾಜ್ಯದಲ್ಲಿ ಉಳಿದುಕೊಳ್ಳಲಿ ಅಂತಾರೆ. ಅಂತಿಮವಾಗಿ ಏನ್ ಆಗುತ್ತೆ ಎನ್ನೋದು ಕಾದು ನೋಡೋಣ. ನನ್ನ ಸ್ಪರ್ಧೆಗೆ ತೆರೆ ಬಿದ್ದಿದೆ. ಏನೇ ಕೇಳಿದ್ರು ಇದೇ ಉತ್ತರ. 2019ರ ಸೋಲಿನ ಬಗ್ಗೆ ಚಿಂತಿಸಿ ಫಲ ಏನು ಇಲ್ಲ. ಮುಂದೆ ಆಗುವುದರ ಬಗ್ಗೆ ಯೋಚನೆ ಮಾಡಬೇಕು ಅಷ್ಟೇ. ನಾನು ಪಾಸಿಟಿವ್ ಡೈರಕ್ಷನ್ ಅಲ್ಲಿ ಹೋಗಬೇಕೆಂಬ ಮನಸ್ಥಿತಿಯಲ್ಲಿ ಇದ್ದೀನಿ. ಕಳೆದು ಹೋಗಿರುವ ವಿಚಾರದ ಬಗ್ಗೆ ನಾನು ಪ್ರಾಮುಖ್ಯತೆ ಕೊಡುವುದಿಲ್ಲ ಎಂದಿದ್ದಾರೆ.