ಬಳೆ ವ್ಯಾಪಾರಿಯ ಕತ್ತು ಸೀಳಿ ಬರ್ಬರ ಕೊಲೆ..!

ಯಾದಗಿರಿ: ಕುಡಿದ ಮತ್ತಿನಲ್ಲಿ ಇಬ್ಬರು ಬಳೆ ವ್ಯಾಪಾರಿಗಳ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸುರಪುರದ ತಿಂಥಣಿಯಲ್ಲಿ ನಡೆದಿದೆ. ಅಥಣಿಯ ಮಲ್ಲಪ್ಪ (38) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಬಾಗಲಕೋಟೆ ಮೂಲದ ಮತ್ತೊಬ್ಬ ಬಳೆ ವ್ಯಾಪಾರಿ ಬುರ್ಯಾನ್ ಕೊಲೆಗೈದ ಆರೋಪಿಯಾಗಿದ್ದಾನೆ. ಇಬ್ಬರೂ ತಿಂಥಣಿಯ ಐತಿಹಾಸಿಕ ಮೌನೇಶ್ವರ ಜಾತ್ರೆಯಲ್ಲಿ ಬಳೆ ವ್ಯಾಪಾರ ಮಾಡಲು ಬಂದಿದ್ದರು.

ಅಕ್ಕಪಕ್ಕದಲ್ಲೇ ಬಳೆ ಅಂಗಡಿ ಹಾಕಿಕೊಂಡಿದ್ದು, ಇಬ್ಬರ ನಡುವೆ ತಡರಾತ್ರಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಆರಂಭಗೊಂಡಿದೆ. ಗಲಾಟೆ ವೇಳೆ ಮಾತಿಗೆ ಮಾತು ಬೆಳೆದು ಮಲ್ಲಪ್ಪನ ಮೇಲೆ ಬುರ್ಯಾನ್ ಹಲ್ಲೆ ನಡೆಸಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.  ಸ್ಥಳಕ್ಕೆ ಸುರಪುರ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಬುರ್ಯಾನ್‍ನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

 

 

Loading

Leave a Reply

Your email address will not be published. Required fields are marked *