ಬೆಂಗಳೂರು: ಸಾರಿಗೆ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದಂತ ಪ್ರಯಾಣಿಕರಿಗೆ ದಂಡದ ಬಿಸಿಯನ್ನು ನಿಗಮ ಮುಟ್ಟಿಸಿದೆ. ಈ ಮೂಲಕ ಬರೋಬ್ಬರಿ 3415 ಪ್ರಯಾಣಿಕರಿಂದ 5.54 ಲಕ್ಷ ದಂಡವನ್ನು ವಸೂಲಿ ಮಾಡಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ನಿಗಮದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಏಪ್ರಿಲ್ 2023ರಲ್ಲಿ ಕೆ ಎಸ್ ಆರ್ ಟಿಸಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳನ್ನು ತನಿಖೆಗೆ ಒಳಪಡಿಸಿದೆ ಎಂದಿದೆ.
ತನಿಖೆಗೆ ಒಳಪಡಿಸಿ ವೇಳೆಯಲ್ಲಿ 3070 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 3415 ಟಿಕೇಟ್ ರಹಿತ ಪ್ರಯಾಣಿಕರಿಂದ ರೂ.5,54,832 ದಂಡವನ್ನು ವಸೂಲಿ ಮಾಡಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 2,38,803 ರೂಗಳನ್ನು ತನಿಖಾಧಿಕಾರಿಗಳನ್ನು ಪತ್ತೆ ಹಚ್ಚಿದ್ದಾರೆ. ತಪ್ಪಿತಕ್ಷರ ವಿರುದ್ಧ ಇಲಾಖಾ ರಿತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ.