ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡುವುದಾಗಿ ಜನರಿಗೆ ಮಾತು ನೀಡಿದ್ದೇವೆ.
ಕೊಟ್ಟ ಮಾತಿನಂತೆ ಆದಷ್ಟು ಬೇಗ ಹುದ್ದೆ ಭರ್ತಿ ಮಾಡುತ್ತೇವೆ. ಅರ್ಹರನ್ನು ಪಾರದರ್ಶಕವಾಗಿ ನೇಮಿಸುತ್ತೇವೆ ಎಂದು ತಿಳಿಸಿದ್ದಾರೆ.
ಕಳೆದ ಸರ್ಕಾರದ ಅವಧಿಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅರ್ಹರನ್ನು ಪಾರದರ್ಶಕವಾಗಿ ನೇಮಿಸಿ, ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನೇಮಕಾತಿ ಹಗರಣಗಳಿಂದ ನೊಂದಿರುವ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುತ್ತೇವೆ ಎಂದು ಹೇಳಿದ್ದಾರೆ.