ನಾಳೆ ಮಧ್ಯಾಹ್ನ 12 ಗಂಟೆಗೆ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮ: ಡಿಸಿಎಂ

ಬೆಂಗಳೂರು: ಸಿಎಂ ಜೊತೆ ಈಗಾಗಲೇ ಚರ್ಚೆ ಮಾಡಲಾಗಿದ್ದು, ನಾಳೆ(ಜೂ.11) ಮಧ್ಯಾಹ್ನ 12 ಗಂಟೆಗೆ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇನ್ನು ಭಾನುವಾರ ಜನರು ಫ್ರೀ ಇರ್ತಾರೆ, ಹಾಗಾಗಿ ನಾನೇ ಭಾನುವಾರ ಕಾರ್ಯಕ್ರಮ ಮಾಡೋಣ ಅಂತಾ ಹೇಳಿದ್ದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

‘ದೇಶಕ್ಕೆ ಪ್ರಜ್ಞಾವಂತರು ಮುಖ್ಯ. ಪೆನ್ನು, ಪೇಪರ್ ಕೈಯಲ್ಲಿ ಇದ್ದಾಗ ಹೇಗೆ ಬಳಸಬೇಕೋ ಹಾಗೇ ಬಳಸಬೇಕು. ಅಧಿಕಾರ ಇದ್ದಾಗ ಜನರ ಒಳಿತಿಗಾಗಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಮಾಜಿ ಆರೋಗ್ಯ ಸಚಿವ ಸುಧಾಕರ್ ಉದಾಹರಣೆ ನೀಡಿದ ಡಿಕೆ ಶಿವಕುಮಾರ್​, ಆರೋಗ್ಯ ಸಚಿವರಾಗಿ ಸುಧಾಕರ್ ಕನಕಪುರಕ್ಕೆ ಬಂದಿದ್ರು, ನಮ್ಮ ಕನಕಪುರಕ್ಕೆ ಇದ್ದ ಆಸ್ಪತ್ರೆಯನ್ನ ತೆಗೆದುಕೊಂಡು ಹೋದ್ರು. ಅದಕ್ಕೆ ಅಧಿಕಾರ ಇದ್ದಾಗ, ಪೆನ್ನು ಜನರ ಒಳಿತಿಗಾಗಿ ಬಳಸಬೇಕು‌. ಒಳ್ಳೇದು ಮಾಡೋದಿದ್ರೆ ಇವತ್ತೇ ಮಾಡಬೇಕು, ನಾಳೆ ಬಗ್ಗೆ ‌ಯೋಚಿಸಬಾರದು ಎಂದು ಡಿಸಿಎಂ ಸಲಹೆ ನೀಡಿದರು.

Loading

Leave a Reply

Your email address will not be published. Required fields are marked *