ಸುತ್ತೂರು ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದ ಅವರು ನಂತರ ಅಲ್ಲಿಂದ ಸುತ್ತೂರು ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ವರುಣಾವನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯ ವಿಚಾರ ‘ ವರುಣಾವನ್ನ ತಾಲೂಕು ಮಾಡಿ ಎಂದು ಜನರು ಕೇಳಿಲ್ಲ.

ತಾಲೂಕು ಮಾಡುತ್ತೇವೆ ಎಂದು ಹೇಳಿದ್ದು ಬಸವರಾಜ ಬೊಮ್ಮಾಯಿ. ನಾನು ಪ್ರಚಾರ ಮಾಡುವಾಗಲೂ ತಾಲೂಕು ಮಾಡಿ ಎಂದು ಕೇಳಿಲ್ಲ. ಬಸವರಾಜ ಬೊಮ್ಮಾಯಿ ತಾಲೂಕು ಮಾಡಿ ಎಂದು ಕೇಳಿದ್ರೆ ಮಾಡಲ್ಲ. ಜನ ಕೇಳಿದರೆ ಮಾತ್ರ ವರುಣವನ್ನು ತಾಲೂಕು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *