ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಬೆಳ್ಳಂ ಬೆಳಗ್ಗೆ ತಂಪೆರೆದ ಮಳೆರಾಯ

ಬೆಂಗಳೂರು ; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆ ಶುರುವಾಗಿದೆ.

ಬಿಪರ್‌ಜಾಯ್ ಚಂಡಮಾರುತದ ಕಾರಣ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಇದೀಗ ಚುರುಕಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಭಾಗಗಳಲ್ಲಿ ಈ ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಇನ್ನೂ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಸುರಿಯುತ್ತಿದ್ದು, ಜನ ಹೊರಗಡೆ ವಾಕಿಂಗ್‌ ಇತ್ಯಾದಿಗಳಿಗೆ ಬರಲು ಹಿಂಜರಿದರು. ಮಲೆನಾಡಿನಂತಾದ ರಾಜಧಾನಿಯಲ್ಲಿ ತುಂತುರು ಮಳೆಯ ನಡುವೆ ಜನ ಓಡಾಡಿದರು. ಇಷ್ಟು ದಿನ ಸೆಕೆ, ಬಿಸಿಲಿನಿಂದ ಕಂಗೆಟ್ಟಿದ್ದ ನಗರವಾಸಿಗಳು ಚುಮುಚುಮು ಚಳಿ ಎಂಜಾಯ್ ಮಾಡಿದರು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯನ್ನು ನಿರೀಕ್ಷಿಸಲಾಗಿದೆ.

Loading

Leave a Reply

Your email address will not be published. Required fields are marked *