ಬೆಂಗಳೂರು: ಯಾವುದೇ ಪಕ್ಷ, ವ್ಯಕ್ತಿಯಾಗಿದ್ದರೂ ಕ್ರಮಕೈಗೊಳ್ಳಬೇಕು. ಸುಳ್ಳು ಸುದ್ದಿ ಹಾಕಿ ಜಾತಿ, ಧರ್ಮದ ನಡುವೆ ಸಂಘರ್ಷ ಸೃಷ್ಟಿಸುತ್ತಾರೆ. ಇದಕ್ಕೆ ಮೊದಲು ಕಡಿವಾಣ ಹಾಕಬೇಕು. ನನಗೇ ಇದರ ಕೆಟ್ಟ ಅನುಭವವಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ ಅಂತ ಸುಳ್ಳು ಸುದ್ದಿ ಹರಡಿದ್ದರು. ಆಗ ನನಗೆ ಸಾಕಷ್ಟು ಹೊಡೆತ ಬಿದ್ದಿದೆ. ಇಲ್ಲದ ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡಿದ್ದರು. ಕೊನೆಗೆ ತಪ್ಪಿತಸ್ಥರನ್ನು ಬಂಧಿಸಿದರು. ಆದರೆ, ನನ್ನ ವ್ಯಕ್ತಿತ್ವಕ್ಕೆ ಡ್ಯಾಮೇಜ್ ಆಗಿತ್ತಲ್ಲವಾ ? ಯಾರೂ ಕೂಡ ಇಂತಹ ಕೆಟ್ಟ ಕೆಲಸ ಮಾಡಬಾರದು. ಯಾವುದೇ ಪಕ್ಷವಾದರೂ ಕ್ರಮಕೈಗೊಳ್ಳಬೇಕು ಫೇಕ್ ನ್ಯೂಸ್ನಿಂದ ಸಾಮಾಜಿಕ ಸ್ವಾಸ್ಥ್ಯ ಕದಡುತ್ತಿರುವ ವಿಚಾರ ಸಚಿವ ಎಂ.ಬಿ ಪಾಟೀಲ್ ಹೇಳಿದರು.