ಖ್ಯಾತ ನಿರೂಪಕ ಮಾಸ್ಟರ್ ಆನಂದ್’ಗೆ ರಿಯಲ್ ಎಸ್ಟೇಟ್ ನಲ್ಲಿ ವಂಚನೆ

ಕನ್ನಡದ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಖ್ಯಾತ ನಿರೂಪಕ ಮಾಸ್ಟರ್ ಆನಂದ್ಗೆ ರಿಯಲ್ ಎಸ್ಟೇಟ್ ನಲ್ಲಿ ವಂಚನೆ ಎಸಗಲಾಗಿದೆ. ನಿವೇಶನ ನೀಡೋದಾಗಿ ಮಲ್ಟಿ ಲೀಪ್ ವೆಂಚರ್ಸ್ ಹೆಸರಿನ ಕಂಪನಿಯು ಆನಂದ್ ಅವರಿಂದ 18.50 ಲಕ್ಷ ರೂಪಾಯಿ ಪಡೆದುಕೊಂಡು ಇದೀಗ ವಂಚನೆ ಎಸಗಿದ್ದು ಈ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.
ಮಲ್ಟಿ ಲೀಪ್ ವೆಂಚರ್ಸ್ ಬೆಂಗಳೂರಿನ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದಲ್ಲಿ ನಿವೇಶನ ನೀಡುವುದಾಗಿ ಕಂಪೆನಿಯು ಹೇಳಿತ್ತು. ಮನಿಕಾ ಕೆಂ.ಎಂ ಇಂದ ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರುವುದಾಗಿಯೂ ತಿಳಿಸಿತ್ತು. ಕಂಪನಿ ಮಾತು ಕೇಳಿಕೊಂಡು ಮಾಸ್ಟರ್ ಆನಂದ್ ಸೈಟ್ ಖರೀದಿಸಿದ್ದರು. ಆದರೆ, 2020 ರ ಸೆಪ್ಟಂಬರ್ ನಿಂದ 2021 ರ ಅಕ್ಟೋಬರ್ ನ ಅವಧಿಯಲ್ಲಿ ಕಂಪನಿ ತನ್ನನ್ನು ವಂಚಿಸಿದೆ ಎಂದು ಗೊತ್ತಾಗಿದ್ದು ಈ ಬಗ್ಗೆ ಆನಂದ್ ದೂರು ದಾಖಲಿಸಿದ್ದಾರೆ.
ಮನಿಕಾ ಕೆಂ ಎಂ ಇಂದ ನಿವೇಶನ (Site) ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ದರಿಂದ ಮಾಸ್ಟರ್ ಆನಂದ್ ಆ ಬಳಿಕ ರಾಮಸಂದ್ರದ 2000 ಅಡಿ ವಿಸ್ತೀರ್ಣದ ನಿವೇಶನ ತೋರಿಸಿದ್ದ ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ನಿವೇಶನವನ್ನು ಖರೀದಿಸಿದ್ದರು. ಮೊದಲು 70 ಲಕ್ಷ ರೂಪಾಯಿಗೆ ಸೈಟ್ ಖರೀದಿ ಒಪ್ಪಂದವಾಗಿ ಹಂತ ಹಂತವಾಗಿ 18.5 ಲಕ್ಷ ರೂಪಾಯಿ ಮುಂಗಡ ಹಣ ಮಾಸ್ಟರ್ ಆನಂದ ಕಂಪನಿಗೆ ನೀಡಿದ್ದರು.
ಮಾಸ್ಟರ್ ಆನಂದ್ ಹಾಗು ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಖರಾರು ಪತ್ರವನ್ನೂ ಕಂಪನಿ ಮಾಡಿಕೊಟ್ಟಿತ್ತು. ಈ ನಡುವೆ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿತ್ತು ಕಂಪನಿ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ಮಾಡಿರಲಿಲ್ಲ ಎಂದು ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ. ಬಿಯುಡಿಎಸ್ ಕಾಯ್ದೆ 2019 ರ ಅಡಿ ಆರೋಪಿಗಳ ವಿರುದ್ದ ಎಫ್ ಐ ಆರ್ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Loading

Leave a Reply

Your email address will not be published. Required fields are marked *