ನಮ್ಮ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ಕೊಡುವ ಬಗ್ಗೆ ಸ್ಪಷ್ಟಪಡಿಸಬೇಕು: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಈಗಾಗಲೇ ರಾಜ್ಯಕ್ಕೆ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ನಮ್ಮ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ಕೊಡುವ ಬಗ್ಗೆ ಸ್ಪಷ್ಟಪಡಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಬೇಕು. ಪದೇ ಪದೇ 10 ಕೆಜಿ ಅಕ್ಕಿಗೆ ಅಡ್ಡಗಾಲು ಹಾಕುತ್ತಿದ್ದೇವೆ ಅಂತಾರೆ. ರಾಜ್ಯ ಸರ್ಕಾರ ಮೇ 2ರಂದು ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ 5 ಕೆಜಿ ಕೊಡುತ್ತಿದೆ, ನಾವು 5 ಕೆಜಿ ಕೊಡುತ್ತೇವೆ ಅಂತ ಹೇಳಲಿ. ನಿಮಗೆ ಅಕ್ಕಿ ಬೇಕಾದರೇ ಕೇಂದ್ರ ಸರ್ಕಾರದ ಬಳಿ ಕೇಳಬೇಕು. ನೈಸರ್ಗಿಕ ವಿಕೋಪ ಬಂದಾಗ ನಮಗೆ ಅಕ್ಕಿ ಸ್ಟಾಕ್ ಅವಶ್ಯಕವಿದೆ. ಕಾಂಗ್ರೆಸ್ ಮೊದಲು ಸುಳ್ಳು ಹೇಳೋದು ಬಂದ್ ಮಾಡಬೇಕು ಹುಬ್ಬಳ್ಳಿ ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *