ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು ;- ನಗರದ ಹಲವೆಡೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಕೆ.ಆರ್​​.ಪುರಂ ತಹಶೀಲ್ದಾರ್​ ಅಜಿತ್​​ ರೈ ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ.

ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂ.

ನಗದು ಪತ್ತೆಯಾಗಿದೆ. ಅಜಿತ್ ಕೆಲ ದಿನಗಳ ಹಿಂದೆ ಕೆ.ಆರ್​.ಪುರಂನಿಂದ ವರ್ಗಾವಣೆಯಾಗಿದ್ದ . ಇವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಸುಮಾರು 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದ್ದು, ಅನೇಕ ದಾಖಲಾತಿಗಳ ಪರಿಶೀಲನೆಯಲ್ಲಿ ಲೋಕಾಯುಕ್ತ ತೊಡಗಿದೆ.

Loading

Leave a Reply

Your email address will not be published. Required fields are marked *