ಎರಡನೇ ಭಾರಿಗೆ ಸಿಎಂ ಆಗಿದ್ದಕ್ಕೆ ಪತ್ರ ಬರೆದು ಅಭಿನಂದಿಸಿದ್ದ 8 ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಸಿದ್ದರಾಮಯ್ಯ ಮರಳಿ ಪತ್ರ ಬರೆದು ಉತ್ತರಿಸಿದ್ದಾರೆ. ಅನ್ನಭಾಗ್ಯ, ಶೂ ಭಾಗ್ಯ, ಕೃಷಿ ಭಾಗ್ಯ, ಕ್ಷೀರ ಭಾಗ್ಯದಂತ ಅನೇಕ ಕಾರ್ಯಕ್ರಮ ನೀಡಿದ್ದೀರಿ. ನೀವು ಬಡವರು, ದೀನ ದಲಿತರ ಪರವಾಗಿರೋ ನಾಯಕ ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಬರೆದಿದ್ದರು. ಇದಕ್ಕೆ ಸಿಎಂ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.