ವಿಧಾನಸೌಧ ಕೆಂಗಲ್ ಗೇಟ್ ಬಳಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲರ ಭಾಷಣ ನಾನು ಕಂಡಂತೆ ಸಪ್ಪೆ ಭಾಷಣ. ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿರುವ ಸರ್ಕಾರ. ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ ಎಂದರು.