ಭರವಸೆಗಳನ್ನು ನೀವು ಈಡೇರಿಸಬೇಕು ಎಂಬುದು ನಮ್ಮ ಆಗ್ರಹ: ಶಾಸಕ ಬಿ.ವೈ ವಿಜಯೇಂದ್ರ

ಬೆಂಗಳೂರು ;- ಕಾಂಗ್ರೆಸ್ ನ ಗೊಡ್ಡು ಬೆದರಿಕೆಗಳಿಗೆ ನಾವು ಹೆದರಲ್ಲ ಎಂದು ಶಾಸಕ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಂತಲ್ಲಿ, ನಿಂತಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ತನಿಖೆ ಮಾಡುವುದಾಗಿ ಗೊಡ್ಡು ಬೆದರಿಕೆ ಹಾಕ್ತಿದ್ದಾರೆ.
ಅವರ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಭರವಸೆಗಳನ್ನು ನೀವು ಈಡೇರಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಬಿಜೆಪಿ ಅಧಿಕಾರಾವಧಿಯಲ್ಲಿನ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳಿ ಗ್ಯಾರಂಟಿ ಜಾರಿಯ ವೈಫಲ್ಯವನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದರು.
ಯಡಿಯೂರಪ್ಪನವರು ಹೊರಗೆ ಹೋರಾಟ ಮಾಡುತ್ತಿದ್ದರೆ. ಬಿಜೆಪಿ ಶಾಸಕರು ಸದನದ ಒಳಗೆ ಪ್ರತಿಭಟನೆ ಮಾಡುತ್ತಾರೆ. ಕಾಂಗ್ರೆಸ್ ಮೊದಲ ದಿನವೇ ಗ್ಯಾರೆಂಟಿ ಅನುಷ್ಠಾನ ಮಾಡ್ತೀವಿ ಎಂದು ಭರವಸೆ ನೀಡಿದರು. ಸರ್ಕಾರ ಬಂದು 50 ದಿನಗಳಾಗಿದ್ರೂ ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಸಮಯ ದೂಡುತ್ತಿದೆ” ಎಂದು ಗರಂ ಆದರು.

Loading

Leave a Reply

Your email address will not be published. Required fields are marked *