ಬೆಂಗಳೂರು: ಮಕ್ಕಳಲ್ಲಿನ ಕಲಿಕಾ ದೋಷಗಳ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಕಾರ್ಯಕ್ರಮ ರೂಪಿಸಲು ನಿರ್ಧಾರ ಮಾಡಲಾಗಿದೆ. ಮರುಸಿಂಚನ ಯೋಜನೆಯಡಿ ಪ್ರೌಢಹಂತದ ಪರೀಕ್ಷೆಗೆ ಸಜ್ಜುಗೊಳಿಸಲು ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಮಾಧ್ಯಮಿಕ, ಪದವಿ ಪೂರ್ವ ಕಾಲೇಜುಗಳಲ್ಲಿ ಲ್ಯಾಬ್ ಆರಂಭ ಮಾಡಲಾಗುವುದು. ಇನ್ನು 2 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು ಎನ್ನಲಾಗಿದೆ. ಮತ್ತು ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ 4 ಲ್ಯಾಬ್ಗಳ ಸ್ಥಾಪನೆ ಮಾಡಲಾಗುವುದು.