ಬೆಂಗಳೂರು: ಟಿ. ನರಸೀಪುರದಲ್ಲಿ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹತ್ಯೆ ಪ್ರಕರಣವನ್ನು ವಿಧಾನ ಪರಿಷತ್ನ ಶೂನ್ಯವೇಳೆಯಲ್ಲಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾಪಿಸಿದರು. ಉನ್ನತ ಮಟ್ಟದ ತನಿಖೆ ಹಾಗೂ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದರು. ಗೃಹ ಸಚಿವರು ಖುದ್ದು ಉತ್ತರ ನೀಡುವಂತೆ ಕೋಟ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದರು. ಗೃಹ ಸಚಿವರ ಸದನದಲ್ಲಿ ಇಲ್ಲದ ಕಾರಣ ಉತ್ತರ ಕೊಡಿಸುವುದಾಗಿ ಸಚಿವ ಕೆಎನ್ ರಾಜಣ್ಣ ತಿಳಿಸಿದರು. ಈ ವೇಳೆ ಸದನದಲ್ಲಿ ಗದ್ದಲವಾಯಿತು. ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು.