ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ..!

ಬೆಂಗಳೂರು ;- ರಾಜಧಾನಿ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದ ಜೋಡಿ ಕೊಲೆ ನಡೆದ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಭಯಾನಕವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಮೃತ ವ್ಯಕ್ತಿಯನ್ನು ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಕಪಿಲ್.
ನಾಲ್ಕೈದು ದುಷ್ಟರ್ಮಿಗಳು ಬೈಕ್ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ದಾಳಿ ಮಾಡಿದ್ದಾರೆ.ಡಿಕೆ ಹಳ್ಳಿ ಕೆ ಎಚ್ ಬಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ದಾಳಿ ಬಳಿಕ ಕಪಿಲ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕೂಡಲೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಕಪಿಲ್ ಉಸಿರು ಚೆಲ್ಲಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Loading

Leave a Reply

Your email address will not be published. Required fields are marked *