ಹಾಸನ: ಜಿಲ್ಲೆಯಲ್ಲಿ ಟೊಮೆಟೊ ಚಿನ್ನದ ಬೆಳೆಯಾಗಿದೆ. ಒಂದು ಎಕರೆಯಲ್ಲಿ ಟೊಮೆಟೊ ಬೆಳೆದು ರೈತ 20 ಲಕ್ಷಕ್ಕೂ ಅಧಿಕ ಲಾಭ ಪಡೆದಿದ್ದಾನೆ. ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸ್ತಿಹಳ್ಳಿಯ ಯುವ ರೈತ ಭೈರೇಶ್ ಪೊಲೀಸ್ ಕರ್ತವ್ಯದ ಜೊತೆ ಕೃಷಿಯಲ್ಲಿ ತೊಡಗಿ ಸಾಕಷ್ಟು ಲಾಭ ಗಳಿಸಿದ್ದಾರೆ. ಇದುವರೆಗೆ ಒಟ್ಟು ಏಳು ಬೀಡು ಕಟಾವು ಮಾಡಿ 1000 ಬಾಕ್ಸ್ ಟೊಮೆಟೊ ಕೊಯ್ದಿರುವ ರೈತ ಇದುವರೆಗೆ 16 ಲಕ್ಣಕ್ಕೂ ಅಧಿಕ ಪ್ರಮಾಣದ ಲಾಭಗಳಿಸಿದ್ದಾರೆ.