ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ, ಬೆಂಗಳೂರಿಗೆ ಸೋನಿಯಾ, ರಾಹುಲ್ ಗಾಂಧಿ ಆಗಮನ

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ನಡೆಯುವ ಹಿನ್ನೆಲೆ ಇಂದು ಬೆಂಗಳೂರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ, ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕೂಡ ಆಗಮಿಸಲಿದ್ದಾರೆ. ಸಭೆಯಲ್ಲಿ 24 ವಿಪಕ್ಷಗಳ 49 ನಾಯಕರು ಭಾಗವಹಿಸುವ ಸಾಧ್ಯತೆ ಇದೆ. ಅಲ್ಲದೇ ವಿಶೇಷ ವಿಮಾನದ ಮೂಲಕ ಉದ್ಧವ್ ಠಾಕ್ರೆ, ಹೇಮಂತ್ ಸೊರೇನ್, ಲಾಲೂ ಪ್ರಸಾದ್, ನಿತೀಶ್, ಶರದ್ ಪವಾರ್ ಕೂಡ ಆಗಮಿಸಲಿದ್ದಾರೆ.

Loading

Leave a Reply

Your email address will not be published. Required fields are marked *