ಬೆಂಗಳೂರು: ಹಾಲಿನ ದರ ಏರಿಕೆ ಮಾಡಿ ಎಂದು ಒಕ್ಕೂಟಗಳು ಬೆನ್ನು ಬಿದ್ದಿದ್ದು, ಈ ಹಿನ್ನೆಲೆ ಇಂದು (ಜು.21) ಹಾಲು ಒಕ್ಕೂಟಗಳು ಮತ್ತು ಕೆಎಂಫ್ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಭಾಗಿಯಾಗಲಿದ್ದಾರೆ.