ಬೆಂಗಳೂರು: ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರ ಸಂಪರ್ಕದಲ್ಲಿದ್ದ ಹಲವರ ವಿಚಾರಣೆ ನಡೆಸುತ್ತಿದ್ದು, ಶಂಕಿತ ಉಗ್ರರು ಜುನೈದ್, ಟಿ.ನಾಸೀರ್ ಮಾತ್ರವಲ್ಲದೆ ಹಲವರ ಸಹಾಯ ಪಡೆದಿದ್ದಾರೆ. ಇನ್ನು ಸಿಸಿಬಿ ತನಿಖೆ ನಡೆಸುತ್ತಿರುವ ಪ್ರಕರಣವನ್ನೇ ಎನ್ಐಎ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.