ವಿಧಾನಪರಿಷತ್: ಗಾಂಧಿ ಪ್ರತಿಮೆ ಮುಂದು ಕುಳಿತು ಬಿಜೆಪಿಯವರು ಧರಣಿ ನಡೆಸಿದರು. ಬಿಜೆಪಿ ನಾಯಕರು ಗೋಡ್ಸೆ ಪ್ರತಿಮೆ ಮುಂದೆ ಧರಣಿ ಮಾಡಬೇಕಿತ್ತು. ಗಾಂಧಿ ಕೊಂದವರು ಅದೇ ಪ್ರತಿಮೆ ಮುಂದೆ ಧರಣಿ ನಡೆಸಿದ್ದು ವಿಪರ್ಯಾಸ ಎಂದು ವಿಧಾನಪರಿಷತ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬರೀ ಸುಳ್ಳು ಹೇಳೋದು, ಘರ್ಷಣೆ ಉಂಟು ಮಾಡುವವರು, ಸಮಾಜ ಒಡೆಯುವವರು ಈಗ ಹೋಗಿ ಗಾಂಧಿ ಮುಂದೆ ಕೂತಿದ್ದಾರೆ. ಇದಕ್ಕೆ ಬಿಜೆಪಿಯವರಿಗೆ ನೈತಿಕತೆ ಇದೆಯಾ? ಎಂದು ಪ್ರಶ್ನಿಸಿದರು.