ಕಲಬುರಗಿ ನಗರದ ದುಬೈ ಕಾಲೋನಿಯಲ್ಲಿ ಮಳೆನೀರು ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಓವರ್ಹೆಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತೆಗೆದಿದ್ದ ತಗ್ಗುಗುಂಡಿಗೆ ಬಿದ್ದು ಅಭಿ(11), ಅಜಯ್(12) ಸಾವನ್ನಪ್ಪಿದ್ದಾರೆ. ಮಳೆ ನೀರಿನಿಂದ ತಗ್ಗುಗುಂಡಿ ಸಂಪೂರ್ಣ ಭರ್ತಿಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಚೌಕ್ ಪೊಲೀಸರು ಭೇಟಿ ನೀಡಿ ಓರ್ವ ಬಾಲಕನ ಶವ ಪತ್ತೆ ಹಚ್ಚಿದ್ದಾರೆ. ಮತ್ತೊಬ್ಬ ಬಾಲಕನ ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ.